Snehapriya.com

June 8, 2025

ಗುಡ್ ಟೈಮ್ ಬ್ಯಾಡ್ ಟೈಮ್ ಬಗ್ಗೆ ಲಂಕೇಶರ ಬರಹ ಇಂದಿಗೂ ವಾಸ್ತವ

Social Share :

ಆತ ಅವತ್ತು ನಿಜಕ್ಕೂ ಒಬ್ಬಂಟಿಯಾಗಿದ್ದ. ಟೈಮ್ಸ್ ವೃತ್ತದಿಂದ ಕಾಲ್ನಡಿಗೆಯಲ್ಲಿ ಹೊರಟ ಆತನ ಒಬ್ಬಂಟಿತನ ಕೇವಲ ದೇಹದ ಏಕಾಂಗಿತನವಾಗಿರಲಿಲ್ಲ; ಬೇರು ವರಸೆ ಕಿತ್ತ ಗಿಡಕ್ಕಿರಬಹುದಾದ ನೋವು, ಚರ್ಮಸುಲಿದು ನಿಲ್ಲಿಸಿದ ಆಕಳಿಗಿರಬಹುದಾದ ಯಾತನೆ ಅವನ ತಬ್ಬಲಿತನದಲ್ಲಿತ್ತು. ಹದಿನೈದು ವರ್ಷದಿಂದ ಆತನ ಸೇವೆ ಪಡೆದ ಸಮಾಜ ಅವನ ಸುತ್ತಲೂ ಇತ್ತು. ನಿತ್ಯದಂತೆ ಪತ್ರಿಕೆ ಓದುವ, ಸಿನಿಮಾ ನೋಡುವ, ತಮ್ಮ ತಮ್ಮ ದಿನ ನಿತ್ಯದ ಕೆಲಸಗಳಲ್ಲಿ ತೊಡಗಿದ ಜನರು ಸುತ್ತ ಸಾಗುತ್ತಿದ್ದರು; ಆದರೆ ಅವರಲ್ಲಿ ಯಾರೂ ಆತನ ಆಳದ ನೋವನ್ನು, ತಬ್ಬಲಿತನವನ್ನು ತಿಳಿಯುವುದು ಸಾಧ್ಯವಿರಲಿಲ್ಲ. ಎಲ್ಲ ಪ್ರಾಮಾಣಿಕತೆಯ ಕಠೋರ ನಿಷ್ಠುರತೆ ತರುವ ಏಕಾಂಗಿತನಕ್ಕೆ ಸಾಕ್ಷಿಯಂತಿದ್ದ ಆ ವ್ಯಕ್ತಿ ತನ್ನ ಆಳದ ಸ್ಮಶಾನ ಮೌನ ಮತ್ತು ತೀಕ್ಷ್ಣ ವೇದನೆಯನ್ನು ಹೊತ್ತು ನಡೆಯುತ್ತಲೇ ಇದ್ದ.
ಆವತ್ತಿನವರೆಗೆ ಲಂಡನ್ನಿನ ಪ್ರಖ್ಯಾತ ದಿನ ಪತ್ರಿಕೆ ‘ದಿ ಟೈಮ್ಸ್‌ ‘ಗೆ ಸಂಪಾದಕನಾಗಿದ್ದವನು ಹೆರಲ್ಡ್ ಈವಾನ್ಸ್ ಆತ. ಸರ್ಕಾರದ ಭ್ರಷ್ಟತೆಯನ್ನುಬಯಲಿಗೆಳೆದು ಸಿಂಹ ಸ್ವಪ್ನವಾಗಿದ್ದವನು ಒಬ್ಬಂಟಿಯಾಗಿದ್ದ.

ತನ್ನ ಕಚೇರಿಯನ್ನು ಕೊನೆಯ ಬಾರಿಗೆ ಬಿಟ್ಟು ಹೊರಟ ಹೆರಲ್ಡ್ ಇವಾನ್ಸ್ ನಲ್ಲಿದ್ದ ಏಕಾಂಗಿತನ ಮತ್ತು ತಬ್ಬಲಿತನ ನಿಷ್ಠೂರತೆ ಕಟ್ಟಿಕೊಂಡ ಎಲ್ಲ ಪತ್ರಕರ್ತರ ಆಳದ ಭಾವನೆಯಾಗಿದೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *