ಸಹಜ ನಟ ರಮೇಶ್ ಅರವಿಂದ್ ಮುಖ್ಯ ಪಾತ್ರದಲ್ಲಿರುವ ಶಿವಾಜಿ ಸುರತ್ಕಲ್ ಚಿತ್ರ ಕಳೆದ ಫೆಬ್ರವರಿ 21 ರಂದು ಬಿಡುಗಡೆಯಾಗಿದ್ದು ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಚಿತ್ರಮಂದಿರಗಳಲ್ಲಿ ತುಂಬಿದ ಗೃಹ ಪ್ರದರ್ಶನ ಕಂಡಿತ್ತು.
ಬಿಡುಗಡೆಯಾಗಿ ಮೂರು ವಾರದ ವರೆಗೂ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ ಲಾಕ್ ಡೌನ್ ಪರಿಣಾಮ ಇದಕ್ಕೂ ತಟ್ಟಿತು. ಚಿತ್ರಮಂದಿರಗಳಲ್ಲಿ ಪ್ರದರ್ಶನ ನಿಲ್ಲಿಸಲಾಯಿತು.
ಈ ಚಿತ್ರಕ್ಕೆ ರಾಹುಲ್ ದ್ರಾವಿಡ್ ರವರು ಮೊದಲ ಪ್ರೇಕ್ಷಕರಾಗಿದ್ದು ವಿಶೇಷ. ಚಿತ್ರದ ಬಗ್ಗೆ ಇಷ್ಟೆಲ್ಲಾ ಹೇಳಲು ಕಾರಣವಿದೆ.
ಇದೆ ತಿಂಗಳ ಅಂದರೆ ಆಗಸ್ಟ್ 7 ರಂದು ಜಿ-5 ಎಂಬ ಓಟಿಟಿ ಅವಕಾಶದಲ್ಲಿ ಚಿತ್ರವು ಬಿಡುಗಡೆಯಾಗುತ್ತಿದೆ. ಕನ್ನಡಿಗರಲ್ಲದೆ ಕನ್ನಡೇತರರು ಕೂಡ ಈ ಚಿತ್ರವನ್ನು ನೋಡಬಹುದು.
ಇದು ಒಂದು ಪತ್ತೆದಾರಿ ಚಿತ್ರವಾಗಿದ್ದು ಚಿತ್ರಮಂದಿರದಲ್ಲಿ ಸಿಕ್ಕ ಪ್ರತಿಕ್ರಿಯೆ ಈ ಅವಕಾಶ ಬಂದಿದೆ. ಅಲ್ಲದೆ ಈ ಚಿತ್ರದ ಹಿಂದಿ ರಿಮೇಕ್ ರೈಟ್ಸ್ ಹಾಗೂ ಉತ್ತರ ಭಾರತದ ಎಲ್ಲ ಭಾಷೆಯ ಡಬ್ಬಿಂಗ್ ರೈಟ್ಸ್ ಅನ್ನು ಬಿ4ಯು ಮೂವೀಸ್ ಪಡೆದುಕೊಂಡಿದೆ ಎನ್ನಲಾಗಿದೆ. ದಕ್ಷಿಣ ಭಾರತದ ಭಾಷೆಗಳಲ್ಲೂ ಕೂಡ ಡಬ್ಬಿಂಗ್ ಆಗುವ ಬಗ್ಗೆ ಇನ್ನು ಮಾತುಕತೆ ನಡೆಯುತ್ತಿದ್ದು ಇದರ ಬಗ್ಗೆ ಮಾಹಿತಿಯನ್ನು ಚಿತ್ರದ ನಿರ್ದೇಶಕರು ನೀಡಬೇಕಿದೆ.