ನಿರ್ದೇಶಕ ಬಿ.ಎಸ್.ಲಿಂಗದೇವರು ಈಗ ನಿಜ ಜೀವನ ಆಧಾರಿತ ಚಿತ್ರವೊಂದನ್ನು ಮಾಡಿ ಮುಗಿಸಿದ್ದಾರೆ.
ಅದು ಆಧುನಿಕ ಬಸವಣ್ಣ ಎಂದೇ ಹೆಸರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಕಥೆ..
ವಿರಾಟಪುರ ವಿರಾಗಿ..!
ಇದು ಚಿತ್ರದ ಹೆಸರು. ಈಚೆಗೆ ನಡೆದ ಚಿತ್ರದ ಪೋಸ್ಟರ್ ಬಿಡುಗಡೆಯಲ್ಲಿ ವಿವಿಧ ಮಠಗಳ ಮಠಾಧೀಶರು ಪಾಲ್ಗೊಂಡಿದ್ದರು.
ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ, ಸದಾಶಿವ ಸ್ವಾಮೀಜಿ ಹಾವೇರಿ, ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಘನ ಬಸವ ಅಮರೇಶ್ವರ ಸ್ವಾಮೀಜಿ ಶಿವಮೊಗ್ಗ, ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಪಾಲ್ಗೊಂಡವರಲ್ಲಿ ಪ್ರಮುಖರು..
ಸಮಾಧಾನ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.. ಸಾಕಷ್ಟು ಮಠಗಳನ್ನು ಸಂಪರ್ಕಿಸಿ ಕಥೆ ಸಿದ್ದಪಡಿಸಿ ಚಿತ್ರವನ್ನು ನಿರ್ಮಿಸಲಾಗಿದೆ. ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ.
ಕುಮಾರ ಶಿವಯೋಗಿಗಳು ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರ ಎಂದರೆ ತಪ್ಪಲ್ಲ..
ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್ ವಿ ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ ಎಂಬ ಮಾಹಿತಿ ಬಂತು..
ಅಪರೂಪಕ್ಕೆ ಇಂತಹ ಪಾತ್ರಗಳು ಸಿಗುತ್ತವೆ. ಈ ಚಿತ್ರದಲ್ಲಿ ಅಭಿನಯಿಸಿರುವುದು ನನ್ನ ಪುಣ್ಯ ಎಂದರು ನಟ ಸುಚೇಂದ್ರ ಪ್ರಸಾದ್.
ಜನವರಿ 12ಕ್ಕೆ ಚಿತ್ರ ಬಿಡುಗಡೆ ಕಾಣಲಿದೆ. ಅದಕ್ಕೂ ಮುನ್ನ ಹಾನಗಲ್ ಕುಮಾರ ಶಿವಯೋಗಿಗಳ ಕುರಿತು ರಾಜ್ಯದ ಐದು ಕಡೆಗಳಲ್ಲಿ ರಥಯಾತ್ರೆ ನಡೆಯಲಿದೆ ಎಂಬ ಮಾಹಿತಿಯೂ ಬಂತು..