ಧೈರ್ಯಂ ಸರ್ವತ್ರ ಸಾಧನಂ ಎಂಬ ಚಿತ್ರದ ಹಾಡು ಬಿಡುಗಡೆ ಕಂಡಿದೆ. ಎ. ಆರ್. ಸಾಯಿರಾಮ್ ಮೊದಲ ಚಿತ್ರ ಇದು.
ಇದೀಗ ‘ಹೆಂಡವೇ ನಮ್ಮ ಮನೆ ದ್ಯಾವರು’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಿರ್ದೇಶಕ ಎ.ಆರ್. ಸಾಯಿರಾಮ್ ಮತ್ತು ಹೃದಯ ಶಿವ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ದೇವಾನಂದ್ ವರ ಪ್ರಸಾದ್ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಇದೆ.
ವಿವನ್ ಕೆ.ಕೆ, ಅನುಷಾ ರೈ ಮುಖ್ಯ ಪಾತ್ರದಲ್ಲಿದ್ದಾರೆ. ಯಶ್ ಶೆಟ್ಟಿ, ಬ.ಲ. ರಜವಾಡಿ, ಪ್ರದೀಪ್ ಪೂಜಾರಿ, ರಾಮ್ ಪವನ್, ವರ್ಧನ್ ತೀರ್ಥಹಳ್ಳಿ, ಚಕ್ರವರ್ತಿ ಚಂದ್ರಚೂಡ್, ಹೊಂಗಿರಣ ಚಂದ್ರು ತಾರಾಬಳಗದಲ್ಲಿದ್ದಾರೆ.
ಚಿತ್ರೀಕರಣ ಪೂರ್ಣಗೊಳಿಸಿ ಇನ್ನು ಒಂದೆರಡು ತಿಂಗಳಲ್ಲಿ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ. ಶ್ರೀಕಾಂತ್ ಸಂಕಲನ, ರವಿಕುಮಾರ್ ಸನ ಛಾಯಾಗ್ರಹಣ ಚಿತ್ರಕ್ಕಿದೆ.