Snehapriya.com

June 8, 2025

ಭಕ್ತಿ ಪಂಥದ ದಾಸರ ಕೊಡುಗೆ ಸಚಿವ ಪ್ರಹ್ಲಾದ್ ಜೋಶಿ ಪ್ರಶಂಸೆ

Social Share :


ಭಕ್ತಿ ರಸದ ಮೂಲಕ ಸಾಮಾನ್ಯರಿಗೂ ಅರ್ಥವಾಗುವಂತೆ ಸಾಹಿತ್ಯದ ವಿಚಾರಧಾರೆ ಹರಿಸಿದ ದಾಸರ ಚಿಂತನೆಗಳು ಜಗತ್ತಿಗೆ ಅನಿವಾರ್ಯ ಮತ್ತು ಬದುಕಿಗೂ ಅನಿವಾರ್ಯ ವಾಗಿವೆ..

ಸರಳ ಸಾಹಿತ್ಯವನ್ನು ಭಕ್ತಿ ರಸವಾಗಿ ಉಣ ಬಡಿಸಿದ್ದು ದಾಸರ ಕೊಡುಗೆ.. ಜನರ ಭಾಷೆಯಲ್ಲಿ ಅರ್ಥವಾಗುವಂತೆ ಮಾಡುವುದೇ ದಾಸ ಸಾಹಿತ್ಯ.

ಹೀಗೆ ದಾಸ ಸಾಹಿತ್ಯ ಮತ್ತು ದಾಸ ಪರಂಪರೆಯನ್ನು ಕೊಂಡಾಡಿದವರು ಕೇಂದ್ರ ಸಚಿವ ಪ್ರಹ್ಲಾದ ಜ್ಯೋಷಿ..

ಸೋಮವಾರ ಅವರು ದಾಸವರೇಣ್ಯ ಶ್ರೀ ವಿಜಯ ದಾಸರ ಕುರಿತ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಶ್ರೀವೇದವ್ಯಾಸರು ರಚಿಸಿದ ವೇದಗಳು ಸಾಮಾನ್ಯ ಜನರಿಗೆ ಅರ್ಥವಾಗುವುದು ಕಷ್ಟ. ಹರಿದಾಸರು ವೇದಗಳ ಸಾರವನ್ನು ಕನ್ನಡ ಭಾಷೆಯಲ್ಲಿ ಜನರಿಗೆ ಅರ್ಥವಾಗುವ ಹಾಗೆ ಹಾಡುಗಳ ಮೂಲಕ ನೀಡಿದ್ದಾರೆ‌‌.

ಶ್ರೀಪುರಂದರದಾಸರ ನಂತರ ಬರುವ ಶ್ರೀವಿಜಯದಾಸರು 2800 ಕ್ಕೂ ಹೆಚ್ಚು ಸುಳಾದಿಗಳನ್ನು, ಸಾಕಷ್ಟು ದೇವರನಾಮ ಹಾಗೂ ಸುಳಾದಿಗಳನ್ನು ರಚಿಸಿದ್ದಾರೆ. ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ ಈ ಚಿತ್ರವನ್ನು ಸ್ನೇಹಿತರಾದ ತ್ರಿವಿಕ್ರಮ ಜೋಶಿ ನಿರ್ಮಾಣ ಮಾಡಿದ್ದಾರೆ.

ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ‌‌. ವಿಜಯಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಪ್ರಹ್ಲಾದ ಜೋಶಿ ಹಾರೈಸಿದರು.

ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ ‘ದಾಸವರೇಣ್ಯ ಶ್ರೀ ವಿಜಯದಾಸರು’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ತ್ರಿವಿಕ್ರಮ ಜೋಶಿ ಅವರು ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಹಾಗೂ ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿರುವ ‘ದಾಸವರೇಣ್ಯ ಶ್ರೀ ವಿಜಯದಾಸರು’ ಆಡಿಯೋ ಬಿಡುಗಡೆಯಲ್ಲಿ..

ಪಂಡಿತ ಪೂಜ್ಯ ಶ್ರೀ ಸತ್ಯಧ್ಯಾನಾಚಾರ್ಯ ಕಟ್ಟಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಮಾಜಿ ಶಾಸಕರಾದ ಬಸವನಗೌಡ, ಬಸವನಗುಡಿ ಶಾಸಕರಾದ ರವಿ ಸುಬ್ರಹ್ಮಣ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಲಹರಿ ಆಡಿಯೋ ಸಂಸ್ಥೆಯ ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *