Snehapriya.com

June 7, 2025

admin

ಪೊಲೀಸ್ ಕಮಿಷನರ್ ಅಮಾನತು ಕಾಲ್ತುಳಿತ: ನ್ಯಾಯಾಂಗ ತನಿಖೆಗೆ..

Social Share :


* ಸೀಮಂತ್ ಕುಮಾರ್ ಸಿಂಗ್ ನೂತನ ಪೊಲೀಸ್ ಆಯುಕ್ತ *

ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಪ್ರಮುಖ ಬೆಳವಣಿಗೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಕಾಲ್ತುಳಿತ ಪ್ರಕರಣದ ತನಿಖೆಗೆ
ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್, ಡಿಸಿಪಿ ಎಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ ಹಾಗೂ ಕಬನ್ ಪಾರ್ಕ್ ಇನ್ಸ್ ಪೆಕ್ಟರ್ ಗಿರೀಶ್ ಅವರನ್ನು ಅಮಾನತುಗೊಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಈ ವಿವರಗಳನ್ನು ನೀಡಿದರು.

ಅಲ್ಲದೆ ಪ್ರಮುಖ ಬೆಳವಣಿಗೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಿಸಿದೆ.

ಸಚಿವ ಸಂಪುಟ ಸಭೆಯ ವಿವರಗಳು:

ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಈ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬುಧವಾರ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾ ದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಡಾ.ಎಚ್.ಸಿ.ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

Social Share :

ದುರಂತ ನಡೆಯ ಬಾರದಿತ್ತು ಮುಖ್ಯಮಂತ್ರಿ ವಿಷಾದ..

Social Share :

ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹಕಚೇರಿ ಕಾವೇರಿಯಲ್ಲಿ ಬುಧವಾರ ನಡೆದ ತುರ್ತು ಸುದ್ದಿಗೋಷ್ಠಿಯ ವಿವರ ಈ ಕೆಳಕಂಡಂತ್ತಿದೆ.

* ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.*

* ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10 ಲಕ್ಷ ಪರಿಹಾರ ಘೋಷಣೆ *

* ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.*

* ಈ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.*

* ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.*

* ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿರುವೆ ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯ ಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ *

* ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

* ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

* ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

* ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರಸುದಾರ ರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ..

* ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Social Share :

ಹೊಸ ಸಂಜು ವೆಡ್ಸ್ ಗೀತಾ -2 ಭಾವನಾತ್ಮಕ ಪಯಣ ಸೇರ್ಪಡೆ

Social Share :

* ಜೂನ್ 6ರಂದು ರಾಜ್ಯಾದ್ಯಂತ ಬಿಡುಗಡೆ *

* ಚಿತ್ರಕ್ಕೆ ಶಿವಣ್ಣ, ಎಸ್.ಮಹೇಂದರ್ ಬೆಂಬಲ *

‘ಎದೆಗಾರಿಕೆ ಇರುವ ನಿರ್ಮಾಪಕರು ಚಿತ್ರಕ್ಕೆ ಖರ್ಚು ಮಾಡುವುದರಲ್ಲಿ ಧಾರಾಳತನ ತೋರುತ್ತಾರೆ. ಅಂತಹ ಚಿತ್ರಗಳು ಖಂಡಿತವಾಗಿ ಗೆಲ್ಲಲೇ ಬೇಕಾಗಿದೆ..’

ಹೀಗೆಂದವರು ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್. ‘ಸಂಜು ವೆಡ್ಸ್ ಗೀತಾ-2’ ಚಿತ್ರದ ಮರು ಬಿಡುಗಡೆಗಾಗಿನ ಅದ್ದೂರಿ ಸಮಾರಂಭದಲ್ಲಿ ಪಾಲ್ಗೊಂಡು ಇಡೀ ಚಿತ್ರತಂಡವನ್ನು ಹಾಡಿ ಹೊಗಳಿದರು.

ಇಲ್ಲಿ ಕಲಾವಿದರು, ತಂತ್ರಜ್ಞರು ಎಲ್ಲರೂ ಪ್ರತಿಭಾವಂತರು. ಜೊತೆಗೆ ಪ್ರತಿ ದೃಶ್ಯವೂ ಅದ್ಭುತ ನೆಲೆಯಲ್ಲಿ ಕೂಡಿರುವಂತೆ ವಿದೇಶದಲ್ಲಿ ಚಿತ್ರೀಕರಣ ಮಾಡಿರುವುದು ಕನ್ನಡದ ಮಟ್ಟಿಗೆ ಹೆಮ್ಮೆಯ ಸಂಗತಿ ಎಂದರು ಶಿವಣ್ಣ.

ಶ್ರೀನಗರ ಕಿಟ್ಟಿ ಹಾಗೂ ರಚಿತಾರಾಮ್ ಮುಖ್ಯ ಭೂಮಿಕೆಯಲ್ಲಿರುವ ‘ಸಂಜು ವೆಡ್ಸ್ ಗೀತಾ-2’ ಚಿತ್ರದ ಹೊಸ ಅವತರಣಿಕೆಯಲ್ಲಿ ಬಹಳ ವಿಶೇಷಗಳಿವೆ ಎಂಬುದು ಚಿತ್ರತಂಡದ ವಿವರ.

ನಿರ್ದೇಶಕ ನಾಗ್ ಶೇಖರ್ ನನ್ನ ಶಿಷ್ಯ ಅವರು ಯಾವಾಗಲೂ ಒಳ್ಳೆಯ ಸಿನಿಮಾಗಳನ್ನೇ ಮಾಡ್ತಾರೆ ಎಂದರು ಹಿರಿಯ ನಿರ್ದೇಶಕ ಎಸ್.ಮಹೇಂದರ್. ಕವಿರಾಜ್, ಸತ್ಯ ಹೆಗಡೆಯಂಥ ತಂತ್ರಜ್ಞರು ಜತೆಗಿದ್ದಾಗ ಆ ಚಿತ್ರಕ್ಕೆ ಇನ್ನೂ ಹೆಚ್ಚಿನ ಮೌಲ್ಯ ಬರುತ್ತದೆ. ನಿರ್ಮಾಪಕರು ಒಂದೊಂದು ಫ್ರೇಮ್ ಗೂ ಕೊಟ್ಯಾಂತರ ಹಣ ಖರ್ಚು ಮಾಡಿದ್ದಾರೆ. ನಾನು ಸ್ನೇಹಲೋಕ ಮಾಡಿದಾಗಲೂ ಇದೇ ಅನುಭವ ಆಗಿತ್ತು ಎಂದರು.

ಟೈಟಲ್ ಮೂಲಕವೇ ಚಿತ್ರದ ಬಗ್ಗೆ ಅಗಾಧ ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ನಾಗಶೇಖರ್ ನಿರ್ದೇಶನದ ಈ ಚಿತ್ರ ಜೂನ್ 6ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆ ಕಾಣುತ್ತಿದೆ‌.

ಮರು ಬಿಡುಗಡೆ ಕಾಣುತ್ತಿರುವ ಚಿತ್ರಕ್ಕೀಗ 21 ನಿಮಿಷಗಳ ಹೃದಯ ಸ್ಪರ್ಶಿ ಚಿತ್ರಣವನ್ನು ಜೋಡಿಸಲಾಗಿದ್ದು, ಪ್ರೇಕ್ಷಕ ಭಾವ ಸ್ಪರ್ಶ ಪಡೆಯುವುದರಲ್ಲಿ ಅನುಮಾನವಿಲ್ಲ ಎಂಬುದು ನಿರ್ದೇಶಕ ನಾಗ್ ಶೇಖರ್ ನಂಬಿಕೆ.

ನಿರ್ಮಾಪಕ ಛಲವಾದಿ ಕುಮಾರ್, ನಟ ಶ್ರೀನಗರ ಕಿಟ್ಟಿ, ಕವಿರಾಜ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಪೊಲೀಸ್ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು ಸೇರಿದಂತೆ ಹಲವಾರು ಪ್ರಮುಖರು ಪ್ರಚಾರ ಸಭೆಯಲ್ಲಿ ಹಾಜರಿದ್ದರು.

Social Share :

ಸುಧಾರಾಣಿ ಈಗ ಘೋಸ್ಟ್ ದೇವರು ದೆವ್ವದ ಹುಡುಕಾಟ

Social Share :

ಕನ್ನಡದ ಹೆಸರಾಂತ ನಟಿ ಸುಧಾರಾಣಿ ಭಯಾನಕ ಎನಿಸುವ ಕಥಾಹಂದರ ಹೊಂದಿರುವ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಜಗತ್ತಿನಲ್ಲಿ ಒಳ್ಳೆಯವರು ಇದ್ದಾರೆ; ಅದೇ ರೀತಿ ಕೆಟ್ಟವರೂ ಇದ್ದಾರೆ. ದೇವರು ಇದ್ದಾನೆ; ದೆವ್ವವೂ ಇದೆ ಎಂದು ಸಾರುವ ಈ ಕಿರು ಚಿತ್ರದ ಹೆಸರು ಘೋಸ್ಟ್..!

ಈಚೆಗೆ ಕಿರುಚಿತ್ರದ ಪ್ರದರ್ಶನ ಮಾಡಿ ಮಾಧ್ಯಮಗಳ ಜೊತೆ ಆಪ್ತವಾಗಿ ಮಾತನಾಡಿದರು ಸುಧಾರಾಣಿ. ಇದರ ಕಥೆ ಕೇಳಿದಾಗ ನಿರ್ಮಾಣ ಮಾಡಬೇಕು ಎಂಬುದು ಪ್ರೇರಣೆಯಾಯಿತು. ಹಾಗಾಗಿ ಕಿರು ಚಿತ್ರದ ಮೂಲಕ ನಿರ್ಮಾಣದ ಜಗತ್ತಿಗೆ ಕಾಲಿಟ್ಟಿರುವೆ ಎಂದು ಆತ್ಮೀಯವಾಗಿ ನಕ್ಕರು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮೊದಲ ಚಿತ್ರ ಆನಂದ್ ಹಾಗೂ ಅನೇಕ ಚಿತ್ರಗಳಲ್ಲಿ ಅಭಿನಯಿಸಿ ಹೆಸರು ಮಾಡಿದ ಸುಧಾರಾಣಿ, ಆನಂತರದಲ್ಲಿ ಎಲ್ಲಾ ಸ್ಟಾರ್ ನಟರ ಫೇವರಿಟ್ ಹಿರೋಯಿನ್ ಎನಿಸಿಕೊಂಡರು‌. ವರನಟ ಡಾ.ರಾಜ್ ಕುಮಾರ್ ಅವರಿಗೆ ಮಗಳಾಗಿ ‘ದೇವತಾ ಮನುಷ್ಯ’ ಚಿತ್ರದಲ್ಲಿ ಅಭಿನಯಿಸಿ; ಅವರೊಂದಿಗೆ ನೃತ್ಯ ಮಾಡಿ ಸೈ ಎನಿಸಿಕೊಂಡರು.

ಈಚೆಗೆ ಪೋಷಕ ನಟಿ ಪಾತ್ರಗಳ ಜೊತೆಗೆ ಕಿರುತೆರೆಯಲ್ಲಿಯೂ ಸೈ ಎನಿಸಿಕೊಂಡ ಸುಧಾರಾಣಿ ಅವರಿಗೆ ‘ಶ್ರೀರಸ್ತು ಸುಭಮಸ್ತು’ ಧಾರಾವಾಹಿ ಸಹ ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಟ್ಟಿತು. ಇದೀಗ ಆ ಧಾರಾವಾಹಿಯ ನಿರ್ದೇಶಕರು ಹೇಳಿದ ಕಥಾ ಪರಿಕಲ್ಪನೆ ಇಷ್ಟವಾಗಿ ಈ ಕಿರುಚಿತ್ರ ನಿರ್ಮಿಸಿದ್ದಾಗಿ ಹೇಳಿದರು.

ಸಸ್ಪೆನ್ಸ್ ಥ್ರಿಲ್ಲರ್ ನ ಈ ಕಿರುಚಿತ್ರವನ್ನು ಸುದೇಶ್ ಕೆ.ರಾವ್ ನಿರ್ದೇಶನ ಮಾಡಿದ್ದು, ಸುಧಾರಾಣಿ ನಟಿಸಿದ್ದಾರೆ. ಕೇವಲ ಎರಡೇ ಪಾತ್ರಗಳು ಇಲ್ಲಿ ಗಮನ ಸೆಳೆಯುತ್ತವೆ.


ಕಿರು ಚಿತ್ರದಲ್ಲಿ ಸುಧಾರಾಣಿ ಯವರ ಜೊತೆಗೆ ನಟಿಸುವುದರ ಜೊತೆಗೆ ನಿರ್ದೇಶಕ ಸುದೇಶ್ ಕೆ ರಾವ್ ನಟಿಸಿದ್ದಾರೆ.

Social Share :

ವಿನೋದ್ ಪ್ರಭಾಕರ್ ಮಾದೇವ ಜೂನ್ 6 ಕ್ಕೆ ಬಿಡುಗಡೆ ಸಿದ್ಧತೆ..

Social Share :


* ಮಾದೇವ ಚಿತ್ರದ ‘ಎದೇಲಿ ತಂಗಾಳಿ’ ಚಿತ್ರದ ಹಾಡು ಬಿಡುಗಡೆ *

* ಬಹು ನಿರೀಕ್ಷಿತ ಈ ಚಿತ್ರ ಜೂನ್ 6 ರಂದು ಬಿಡುಗಡೆ *

ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ‘ಮಾದೇವ’ ಚಿತ್ರವು ಬಿಡುಗಡೆಗೆ ಸಜ್ಜುಗೊಂಡಿದೆ‌. ರಾಬರ್ಟ್ ಚಿತ್ರದಲ್ಲಿ ವಿನೋದ್ ಜೋಡಿಯಾಗಿದ್ದ ಸೋನಾಲ್ ಮಂಥೇರೋ ಈ ಚಿತ್ರದಲ್ಲಿಯೂ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ ಚಿತ್ರವನ್ನು ನವೀನ್ ರೆಡ್ಡಿ ಬಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಪ್ರಸನ್ನ ಕುಮಾರ್ ಬರೆದಿರುವ, ಪ್ರದ್ಯೋತನ್ ಸಂಗೀತ ನೀಡಿರುವ ‘ಎದೇಲಿ ತಂಗಾಳಿ’ ಎಂಬ ಹಾಡಿನ ಬಿಡುಗಡೆ ಹಾಗೂ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಸಭೆ ಈಚೆಗೆ ಜರುಗಿತು.

ಶ್ರೀನಗರ ಕಿಟ್ಟಿ, ನಟಿ ಶೃತಿ ಹಾಗೂ ಇತರ ಕಲಾವಿದರು ಮತ್ತು ತಂತ್ರಜ್ಞರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಈ ಚಿತ್ರವು ತಮ್ಮ ವೃತ್ತಿ ಬದುಕಿನ ವಿಭಿನ್ನ ನೆಲೆಯಲ್ಲಿ ನಿಲ್ಲುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು ಮರಿ ಟೈಗರ್ ವಿನೋದ್ ಪ್ರಭಾಕರ್.

ನಿರ್ಮಾಪಕ ಆರ್ ಕೇಶವ್. ಸಂಗೀತ ನಿರ್ದೇಶಕ ಪ್ರದ್ಯೋತ್ತನ್‍ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Social Share :

ದರ್ಶನ್ ಡೆವಿಲ್ ಮಾತು ಮುಕ್ತಾಯ..

Social Share :

ದರ್ಶನ್ ಡೆವಿಲ್ ಮಾತು ಮುಕ್ತಾಯ..

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ರಾಜಸ್ಥಾನ ಹಾಗೂ ಇತರೆಡೆ ಚಿತ್ರೀಕರಣ ನಡೆಸಲಾಗಿದೆ. ಸದ್ಯದಲ್ಲೇ ಮಾತಿನ ಜೋಡಣೆ(ಡಬ್ಬಿಂಗ್) ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್ ಗಳ ಮೂಲಕ ಗಮನ ಸೆಳೆದಿರುವ ‘ಡೆವಿಲ್’ ಚಿತ್ರದ ಮತ್ತೊಂದು ವಿಭಿನ್ನ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಅದು ರೆಬೆಲ್ ಸ್ಟಾರ್ ಅಂಬರೀಷ್ ಅವರ ಅಂತ ಚಿತ್ರದ ಪೋಸ್ಟರ್ ನೆನಪಿಸುತ್ತಿದೆ.

ಸುಧಾಕರ್.ಎಸ್.ರಾಜ್ ಛಾಯಾಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ಚಿತ್ರಕ್ಕಿದೆ.

ದರ್ಶನ್ ಜೋಡಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಹಾಗೂ ಇತರರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Social Share :

ರೆಟ್ರೋ ಮಾದರಿ ಸುಂದರ ಸರಳ ಸುಬ್ಬರಾವ್ ಹಾಡು ಅತಿ ವಿರಳ..

Social Share :

ಚಿತ್ರದ ಬಗೆಗಿನ ವಿವರ ನೀಡುವಾಗ ಅದರ ಒಳಗಿನ ಶ್ರೀಮಂತಿಕೆಯ ವೈಭವೀಕರಣ ನಡೆದು ಹೋಯಿತು. ಅವು ಚಿತ್ರದ ತಂತ್ರಜ್ಞರ ಹೆಚ್ಚುಗಾರಿಕೆಯ ಕಸೂತಿಯ ವಿವರಗಳಾಗಿದ್ದವು..

ಚಿತ್ರದ ಹೆಸರು ಸರಳ ಸುಬ್ಬರಾವ್..!

ಕೃಷ್ಣ ಅಜಯ್ ರಾವ್ ಮುಖ್ಯ ಪಾತ್ರದಲ್ಲಿರುವ ಈ ಚಿತ್ರವನ್ನು ಶ್ರಾವಣಿ ಸುಬ್ರಮಣಿ ಹಾಗೂ ಇತರ ಹಿಟ್ ಚಿತ್ರಗಳನ್ನು ಮಾಡಿದ ಮಂಜು ಸ್ವರಾಜ್ ನಿರ್ದೇಶನ ಮಾಡಿರುವುದು ವಿಶೇಷ..

70ರ ದಶಕದ ರೆಟ್ರೋ ಮಾದರಿಯ ಉಡುಗೆ ತೊಡುಗೆಯ ಜೊತೆಗೆ ನವ ನೂತನ ವಿನ್ಯಾಸದ ಜೊತೆಗೆ ಬಂದ ಹಾಡು ಬಾಲಿವುಡ್ ಚಿತ್ರಗಳನ್ನು ನೆನಪಿಸಿತು.

ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಾಣವಿರುವ ಚಿತ್ರದಲ್ಲಿ ಮುಂಬೈ ಬೆಡಗಿ ಮಿಷಾ ನಾರಂಗ್ ಹಾಗೂ ಇತರರ ತಾರಾಗಣವಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಕವಿರಾಜ್ ಗೀತರಚನೆ ಇದೆ. ಸಂಜಿತ್ ಹೆಗ್ಡೆ ಹಾಡಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯವಿದೆ‌ ಎಂಬ ಮಾಹಿತಿ ನೀಡಿತು ಚಿತ್ರತಂಡ.

ರೆಟ್ರೋ ಹಾಡು ಸುಂದರವಾಗಿ ಮೂಡಿ ಬರಲು ಕಾರಣಗಳೇನು; ತಂತ್ರಜ್ಞರ ವಿಶೇಷ ತಂಡ ಯಾವ ರೀತಿ ಶ್ರಮಪಟ್ಟಿದೆ ಎಂಬುದನ್ನು ನಿರ್ದೇಶಕ ರಿಂದ ಹಿಡಿದು ಪ್ರತಿಯೊಬ್ಬರು ವಿವರ ನೀಡಿದರು.

ನಿರ್ದೇಶಕ ಮಂಜು ಸ್ವರಾಜ್ ಪ್ರತಿಯೊಬ್ಬರ ಸಹಕಾರ ನೆನೆದರೆ, ನಿರ್ಮಾಪಕ ಲೋಹಿತ್ ನಂಜುಂಡಯ್ಯ ಇದೊಂದು ಪ್ರಯೋಗ ಮತ್ತು ಇಷ್ಟಪಟ್ಟು ಮಾಡಿರುವ ಸಿನಿಮಾ ಎಂಬುದನ್ನು ವಿವರಿಸಿದರು.

ರಂಗಾಯಣ ರಘು, ರಘು ರಾಮನ ಕೊಪ್ಪ, ವಿಜಯ್ ಚೆಂಡೂರ್ ಹೀಗಕಲಾ, ಚಿತ್ ಕಲಾ, ಶ್ರೀ,
ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಪ್ರದೀಪ್ ಪದ್ಮಕುಮಾರ್, ವಸ್ತ್ರ ವಿನ್ಯಾಸ ಮಾಡಿರುವ ರಂಜಿತ್, ಸಂಕಲನಕಾರ
ಬಸವರಾಜ್ ಅರಸ್, ಕಲಾ ನಿರ್ದೇಶಕ ಅಮರ್ ಚಿತ್ರದ ಬಗ್ಗೆ ಮಾತನಾಡಿದರು.

ನಿರ್ದೇಶಕ ಸಿಂಪಲ್ ಸುನಿ, ನೃತ್ಯ ನಿರ್ದೇಶಕಿ ಮದನ್ ಹರಿಣಿ ಚಿತ್ರಕ್ಕೆ ಶುಭ ಹಾರೈಸಿದರು.

ಈ ಚಿತ್ರದಲ್ಲಿ ನಟಿಸಿರುವುದು ನನ್ನ ಪುಣ್ಯ ಎಂದರು ಕೃಷ್ಣ ಅಜಯ್ ರಾವ್. ಯುದ್ಧಕಾಂಡ-2 ಚಿತ್ರದ ನಿರ್ಮಾಣ ಸಂದರ್ಭದಲ್ಲಿ ಸಿಕ್ಕಿದ ಚಿತ್ರವಿದು. ಇದರಲ್ಲಿ ನಾನು ಪಾತ್ರ ಮಾಡುವಾಗ ವರ ನಟ ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಅನೇಕರನ್ನು ಕಂಡುಕೊಂಡಿದ್ದೇನೆ ಎಂದರು.

Social Share :

ಶಿವನ ಹಾಡಿಗೆ ಗುರುಗಳ ಸಾಂಗತ್ಯ 45 ಚಿತ್ರದ ಶಿವಂ ಶಿವಂ ಸನಾತನಂ

Social Share :

* ರಮೇಶ್ ರೆಡ್ಡಿ ನಿರ್ಮಾಣದ ಚಿತ್ರ *

* ಸಾಂಪ್ರದಾಯಿಕ ಉಡುಪಿನಲ್ಲಿ ಶಿವರಾಜ್ ಕುಮಾರ್ *

* ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರಿಂದ ಹಾಡು ಬಿಡುಗಡೆ *

ಬಹು ನಿರೀಕ್ಷಿತ ’45’ ಚಿತ್ರದ ಹೊಸ ಹಾಡು ಶಿವಂ ಶಿವಂ ಸನಾತನಂ ಬಿಡುಗಡೆಗೊಂಡಿದೆ.

ಕರುನಾಡ ‌ಚಕ್ರವರ್ತಿ ಡಾ.ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ ಚಿತ್ರದ ಈ ಹಾಡಿನಲ್ಲಿ ಬಹಳಷ್ಟು ವಿಶೇಷಗಳಿವೆ.

ಡಾ.ವಿ.ನಾಗೇಂದ್ರಪ್ರಸಾದ್ ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಸಂಗೀತ ನೀಡಿರುವ ‘ಶಿವಂ ಶಿವಂ ಸನಾತನಂ..’ ಹಾಡು ಈಚೆಗೆ ಬಿಡುಗಡೆಗೊಂಡಿದೆ.

ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ದೂರದ ದೆಹಲಿಯಿಂದ ಆಗಮಿಸಿ ಶಿವನ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡದವನ್ನು ಆಶೀರ್ವದಿಸಿದರು.

ಈ ಹಾಡಿಗೆ ಶಿವರಾಜಕುಮಾರ್ ಅವರು ನೃತ್ಯ ಮಾಡಿದ್ದು ವಿಶೇಷವಾಗಿತ್ತು. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಶಿವನ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ‌ಮಾತನಾಡಿದರು.‌

ಒತ್ತಡದ ಕಾರ್ಯಗಳಿದ್ದರೂ ದೂರದ ಊರಿನಿಂದ ಬಂದು ಹಾಡು ಬಿಡುಗಡೆ ಮಾಡಿಕೊಟ್ಟ ಪೂಜ್ಯರಿಗೆ ಅನಂತ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

ಚಿತ್ರಕ್ಕೆ ಅರ್ಜುನ್ ಜನ್ಯ ಅವರಂತಹ ನಿರ್ದೇಶಕರು ಸಿಕ್ಕಿದ್ದು ಬಹಳ ಖುಷಿಯಾಗಿದೆ. ಈ ಚಿತ್ರದ ಆರಂಭದಿಂದಲೂ ಅವರು ಈ ಚಿತ್ರಕ್ಕಾಗಿ ತೊಡಗಿಸಿಕೊಂಡಿದ್ದಾರೆ. ಇನ್ನೂ ಇಂದು ಬಿಡುಗಡೆಯಾಗಿರುವ ಶಿವನ ಕುರಿತಾದ ಹಾಡಂತೂ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ. ಈ ಹಾಡು ಇಡೀ ದೇಶದೆಲ್ಲೆಡೆ ಸದ್ದು ಮಾಡಲಿದೆ. ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ವಿಜಯ್ ಪ್ರಕಾಶ್ ಅವರ ಗಾಯನ ಮಧುರವಾಗಿದೆ. ಶಿವರಾಜಕುಮಾರ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕರು.

ಈ ಹಾಡು ಹಾಗೂ ಚಿತ್ರ ಇಷ್ಟು ಅದ್ದೂರಿಯಾಗಿ ಮೂಡಿಬರಲು ನಿರ್ಮಾಪಕ ರಮೇಶ್ ರೆಡ್ಡಿ ಅವರ ಉದಾರ ಮನಸ್ಸು ಪ್ರಮುಖ ಕಾರಣ. ಡಾ.ಶಿವರಾಜ್ ಕುಮಾರ್ ಅವರ ಹೃದಯ ವೈಶಾಲ್ಯ ಮನೋಭಾವದಿಂದ ನಾನು ನಿರ್ದೇಶಕನ ಸ್ಥಾನ ಅಲಂಕರಿಸಿರುವೆ
ಎಂದರು ಅರ್ಜುನ್ ಜನ್ಯ.

ಕಳೆದ ವರ್ಷ ನಾನು ಈ ಚಿತ್ರದ (ಕನ್ನಡ) ಡಬ್ಬಿಂಗ್ ಮುಗಿಸಿದ್ದೆ. ಈಗ ತಮಿಳಿನಲ್ಲಿ ಡಬ್ ಮಾಡುತ್ತಿದ್ದೇನೆ. ಆದಷ್ಟು ಎಲ್ಲಾ ಭಾಷೆಗಳಲ್ಲೂ ನಾನೇ ಡಬ್ ಮಾಡುತ್ತೇನೆ‌. ನನ್ನ ಧ್ವನಿ ಎಲ್ಲಾ ಕಡೆ ತಲುಪಲಿ ಎಂಬುದು ನನ್ನ ಆಶಯವಾಗಿದೆ ಎಂದು ಶಿವರಾಜ್ ಕುಮಾರ್ ತಿಳಿಸಿದರು. ‌

ಹಾಡಿನ ಬಗ್ಗೆ ಡಾ.ವಿ.ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು. ಗಾಯಕ ವಿಜಯ್ ಪ್ರಕಾಶ್ ಸಹ ಹಾಡಿನ ಕುರಿತು ಅನುಭವವನ್ನು ಹಂಚಿಕೊಂಡರು.

Social Share :

ಮಾದಕ ದ್ರವ್ಯದ ಜಾಗೃತಿ ವರಸೆ ಈ ವಾರ ಟಕೀಲ ಹೊಸ ಭರವಸೆ

Social Share :

* ಮೇ 16ಕ್ಕೆ ಬಿಡುಗಡೆ *

ಡ್ರಗ್ ಮಾಫಿಯಾ ಹತ್ತಿಕ್ಕುವ ಹೊಸ ವರಸೆಗಳನ್ನು ಒಳಗೊಂಡಿರುವ ಜೊತೆಗೆ ಮಾದಕ ಒಳ ನೋಟಗಳನ್ನು ಬಿಂಬಿಸುವ ‘ಟಕೀಲ’ ಈ ವಾರ ಬಿಡುಗಡೆ ಕಾಣುತ್ತಿದೆ.

ಧರ್ಮ ಕೀರ್ತಿರಾಜ್ ಹಾಗೂ ನಿಖಿತಾ ಸ್ವಾಮಿ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರವನ್ನು ಹಿರಿಯ ಸಿನಿ ಛಾಯಾಗ್ರಾಹಕ ಪ್ರವೀಣ್ ನಾಯಕ್ ನಿರ್ದೇಶಿಸಿದ್ದಾರೆ.

ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ ಈ ಚಿತ್ರದಲ್ಲಿ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್, ಜಯರಾಜ್, ಸುಶ್ಮಿತಾ, ನಿರ್ದೇಶಕ ಪ್ರವೀಣ್‌ನಾಯಕ್ ಒಳಗೊಂಡ ತಾರಾಗಣವಿದೆ.

ಜೀವನದಲ್ಲಿ ಒಂದು ಬಾರಿ ಬರುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು; ಮಾದಕ ವರಸೆಯಲ್ಲಿ ಕೈ ಜಾರುವ ಬದುಕು ಎಂತಹ ಸಂಕಷ್ಟಕ್ಕೆ ದೂಡಬಹುದು ಎಂಬ ಸಂದೇಶ ಚಿತ್ರದಲ್ಲಿದೆ.

ಈಚೆಗೆ ಬಿಡುಗಡೆ ಕಂಡ ಚಿತ್ರದ ಟ್ರೈಲರ್ ಜನಮನದ ಗಮನ ಸೆಳೆದಿದೆ. ಬಹಳವೇ ಕಷ್ಟದ ಸಂದರ್ಭಗಳನ್ನು ಎದುರಿಸಿ ಮರಡಿಹಳ್ಳಿ ನಾಗಚಂದ್ರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಬಹಳ ಸಮಯದ ಬಳಿಕ ಪ್ರವೀಣ್ ನಾಯಕ್ ಚಿತ್ರವನ್ನು ನಿರ್ದೇಶನ ಮಾಡಿದ್ದು, ಈ ಚಿತ್ರದಲ್ಲಿ ಮಾದಕತೆ ಹೆಚ್ಚಾಗಿ ಬರಲು ಅದರದೇ ಆದ ಕಾರಣಗಳಿವೆ ಎಂಬುದು ಅವರ ಸಮರ್ಥನೆ.

ಮನಶಾಸ್ತ್ರ ಹಾಗೂ ಆಧ್ಯಾತ್ಮಿಕತೆ ಚಿತ್ರದ ಭಾಗವಾಗಿರುತ್ತದೆ. ಮನಸ್ಥಿತಿಗಳನ್ನು ಅರಿಯುವ ಪ್ರಯತ್ನದ ಜೊತೆಗೆ ಮಾದಕ ವಸ್ತು ಜೀವನವನ್ನು ಹೇಗೆ ಹಾಳು ಮಾಡುತ್ತದೆ ಎಂಬುದರ ವಿವರ ಇಲ್ಲಿ ಸಿಗುತ್ತದೆ ಎಂಬ ವಿವರಣೆ ಅವರದು.

ಚಿತ್ರದ ಬಿಡುಗಡೆ ತಡವಾಗಿದೆ ಎಂಬುದು ನಿಜವಾದರೂ ಜಯಣ್ಣ ಫಿಲಮ್ಸ್ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಸುಮಾರು 150 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಕಾಣುತ್ತಿದೆ ಎಂಬ ವಿವರಣೆ ನಿರ್ಮಾಪಕ ನಾಗಚಂದ್ರ ಅವರದು.

ಧರ್ಮಾ ಕೀರ್ತಿರಾಜ್ ಶ್ರೀಮಂತ ವ್ಯಾಪಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಿಖಿತಾ ಸ್ವಾಮಿ ಗ್ಲಾಮರ್ ಬೊಂಬೆಯಾಗಿ ಮೆರೆದಿದ್ದಾರೆ.

ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ರೇಣುಕುಮಾರ್ ಸಂಗೀತ, ಗಿರೀಶ್ ಸಂಕಲನ, ಪ್ರಶಾಂತ್ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Social Share :

ದುನಿಯಾ ವಿಜಯ್ ಮಾರುತ ಆಡಿಯೋದಿಂದ ಭಾರಿ ಮೊತ್ತ

Social Share :

*ಝೇಂಕಾರ್ ಮ್ಯೂಸಿಕ್ ನಲ್ಲಿ ಮಾರುತ ಚಿತ್ರದ ಹಾಡುಗಳು..*

*ಭಾರಿ ಮೊತ್ತಕ್ಕೆ ಮಾರಾಟ *

* ಎಸ್ ನಾರಾಯಣ್ ನಿರ್ದೇಶನದಲ್ಲಿ‌ ದುನಿಯಾ ವಿಜಯ್ – ಶ್ರೇಯಸ್ ಮಂಜು ಆಭಿನಯ *

ಕನ್ನಡದ ಮುಂಚೂಣಿಯ ನಿರ್ದೇಶಕರಲ್ಲಿ ಪ್ರಮುಖರಾದ ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಬಹಳ ಸಮಯದ ಬಳಿಕ ಒಂದಾಗಿ ಮಾಡಿರುವ ಚಿತ್ರ ಮಾರುತ..

ಕೆ.ಮಂಜು ಪುತ್ರ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಕೆ.ಮಂಜು ಮತ್ತು ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ.

ಈ ಚಿತ್ರತಂಡ ಈಚೆಗೆ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಅದೇನೆಂದರೆ, ಜೆಸ್ಸಿಗಿಫ್ಟ್ ಸಂಗೀತ ನೀಡಿರುವ ಆಡಿಯೋ ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಝೇಂಕಾರ್ ಮ್ಯೂಜಿಕ್ ಆಡಿಯೋ ಹಕ್ಕುಗಳನ್ನು ಖರೀದಿಸಿದೆ.

ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರ ನಿರ್ದೇಶನದ ‘ಸೂರ್ಯವಂಶ’ ‘ಜಮೀನ್ಧಾರು’, ‘ಸಿಂಹಾದ್ರಿಯ ಸಿಂಹ’, ‘ನನ್ನವಳು ನನ್ನವಳು’, ‘ಅಂಜಲಿ ಗೀತಾಂಜಲಿ’, ‘ತವರಿನ ತೊಟ್ಟಿಲು’ ಮೊದಲಾದ ಅನೇಕ ಸೂಪರ್ ಹಿಟ್ ಚಿತ್ರಗಳ ಆಡಿಯೋ ಹಕ್ಕನ್ನು ಸಹ ಝೇಂಕಾರ್ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿತ್ತು.

‘ಮಾರುತ’ ಚಿತ್ರದ ಐದು ಹಾಡುಗಳು ಚಿತ್ರರಸಿಕರ ಮನ ಗೆಲ್ಲುವಂತಿವೆ. ಹಾಗಾಗಿ ಈ ಜನಪ್ರಿಯವಾಗಲಿದೆ ಎಂಬುದು ಝೇಂಕಾರ್ ಮ್ಯೂಸಿಕ್ ನ ಭರತ್ ಜೈನ್ ವಿವರಣೆ.

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ ‘ಮಾರುತ’ ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಮಂಜು‌, ಬೃಂದಾ, ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಹಾಗೂ ಇತರರ ತಾರಾಬಳಗವಿದೆ.

ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿರುವುದು ವಿಶೇಷವಾಗಿದೆ.

Social Share :