ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ಹೆಸರಾಂತ ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಒಂಭತ್ತನೇ ದಿಕ್ಕು’ ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮೊದಲಾದವರಿದ್ದಾರೆ.
ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ ಗುರು ದೇಶಪಾಂಡೆ ಈ ಚಿತ್ರದ ಬ್ಯುಸಿನೆಸ್ ಅಸೋಸಿಯೇಟ್.
ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.
ದಯಾಳ್ ಅವರ ಮಹತ್ವಾಕಾಂಕ್ಷೆಯ ಈ ಚಿತ್ರದ ಅನಿಮೇಷನ್ ಅವತರಣಿಕೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿನ್ನೆಲೆ ಧ್ವನಿ ನೀಡಿರುವುದು ವಿಶೇಷವಾಗಿದೆ.