ಒಂದು ಚಿತ್ರ ನೂರು ದಿನಗಳನ್ನು ಪೂರೈಸುವುದು ಈ ದಿನಗಳಲ್ಲಿ ಸಾಮಾನ್ಯ ವಿಷಯ ಅಲ್ಲವೇ ಅಲ್ಲ. ಅದರಲ್ಲಿಯೂ ಗಳಿಕೆಯಲ್ಲಿ ದಾಖಲೆ ನಿರ್ಮಿಸಿ ಶತ ದಿನ ಪೂರೈಸುವುದು ಸಾಧ್ಯವೇ..
ಹೊಂಬಾಳೆ ಫಿಲಮ್ಸ್ ನಿರ್ಮಾಣದ ಹಾಗೂ ವೃಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಅಂತಹ ಸಾಧನೆ ಮಾಡಿದೆ.
ಬೆಂಗಳೂರಿನ ವಿಜಯನಗರದಲ್ಲಿರುವ ಭಂಟರ ಸಂಘದ ಆವರಣದಲ್ಲಿ ಭಾನುವಾರ ಕಾಂತಾರ ಚಿತ್ರತಂಡದ್ದೇ ಕಲರವ. ಸ್ಮರಣ ಫಲಕ ಪಡೆದು ಗೆಲುವಿನ ಸಂಭ್ರಮವನ್ನು ಹೊತ್ತ ಪ್ರತಿಯೊಬ್ಬರ ಮುಖದಲ್ಲಿಯೂ ಸಂತಸದ ಹೊನಲು ಹರಿದಿತ್ತು.
ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಥಾಮಸ್ ಡಿಸೋಜ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಚಿತ್ರದ ಯಶಸ್ಸಿಗೆ ಕಾರಣರಾದ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ ಎಂದರು ವೃಷಬ್ ಶೆಟ್ಟಿ.
ನಿರ್ಮಾಪಕ ವಿಜಯ್ ಕಿರಗಂದೂರು, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಗಾಯಕ ವಿಜಯ ಪ್ರಕಾಶ್, ನಟಿ ಸಪ್ತಮಿ ಗೌಡ ಹಾಗೂ ಚಿತ್ರತಂಡದ ಸಾಕಷ್ಟು ಕಲಾವಿದರು, ತಂತ್ರಜ್ಞರು ಈ ಸಂದರ್ಭದಲ್ಲಿ ಹಾಜರಿದ್ದರು.