ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಕೃಷ್ಣೇಗೌಡ ನಿರ್ದೇಶನದ ‘ನಾನು ಕುಸುಮಾ’ ಪ್ರಥಮ ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿ ಗೆದ್ದುಕೊಂಡಿದೆ.
ಸುಮಾರು ಒಂದು ವಾರಗಳ ಕಾಲ ಸಿನಿ ರಸಿಕರಿಗೆ ರಸದೌತಣ ನೀಡಿದ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಸಂಪನ್ನಗೊಂಡಿದ್ದು, ಚಿತ್ರಗಳ ಸ್ಪರ್ಧೆಯ ವಿವರಗಳನ್ನು ಪ್ರಕಟಿಸಲಾಗಿದೆ.
ಕನ್ನಡ ಸ್ಪರ್ಧಾ ವಿಭಾಗದ ದ್ವಿತೀಯ ಅತ್ಯುತ್ತಮ ಚಿತ್ರವಾಗಿ ಪೃಥ್ವಿ ಕೊಣನೂರು ನಿರ್ದೇಶನದ ‘ಹದಿನೇಳೆಂಟು’ ಹಾಗೂ ತೃತೀಯ ಅತ್ಯುತ್ತಮ ಚಿತ್ರವಾಗಿ ಉತ್ಸವ್ ಗೋನಾವರ್ ಅವರ ‘ಫೋಟೋ’ ಪ್ರಶಸ್ತಿಯನ್ನು ಮಡಿಲಿಗೆ ಹಾಕಿಕೊಂಡಿದೆ. ಅದೇ ರೀತಿ ಕನ್ನಡ ಸ್ಪರ್ಧಾ ವಿಭಾಗದಲ್ಲಿದ್ದ ಮನ್ಸೋರೆ ನಿರ್ದೇಶನದ ’19 20 21′ ಜ್ಯೂರಿ ಮೆಚ್ಚುಗೆ ವಿಶೇಷ ಪ್ರಶಸ್ತಿಗೆ ಭಾಜನವಾಗಿದೆ.
ಕಾ.ತ.ಚಿಕ್ಕಣ್ಣ ಅವರ ಕಥೆ ಆಧಾರಿತ ‘ಕೋಳಿ ಎಸ್ರು’ ಭಾರತೀಯ ಚಿತ್ರ ವಿಭಾಗದಲ್ಲಿ ಅತ್ಯುತ್ತಮ ಪ್ರಥಮ ಚಿತ್ರವಾಗಿ ಪ್ರಶಸ್ತಿ ಗೆದ್ದುಕೊಂಡಿದೆ.
ಏಷ್ಯನ್ ವಿಭಾಗದಲ್ಲಿ ದೇವೇಂದ್ರ ಬಡಿಗೇರ್ ನಿರ್ದೇಶನದ ‘ಇನ್’ ಜ್ಯೂರಿಗಳ ವಿಶೇಷ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಹಾಗೆಯೇ ಬಿ.ಎಸ್.ಲಿಂಗದೇವರು ನಿರ್ದೇಶನದ ವಿರಾಟಪುರದ ವೀರಾಗಿ ತೃತೀಯ ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.