Snehapriya.com

June 9, 2025

ಸುಶ್ರಾವ್ಯ ಗೀತೆಗೆ ಮನಸೋತರು ಅದು ಮೆಲೋಡಿ ಡ್ರಾಮಾ ಹಾಡು

Social Share :

ಆಶಿಕಿ-2 ಖ್ಯಾತಿಯ ಮಧುರ ಕಂಠದ ಗಾಯಕಿ ಪಲಾಕ್ ಮುಚ್ಚಲ್ ಹಾಗೂ ವರುಣ್ ಪ್ರದೀಪ್ ಹಾಡಿರುವ ಗೀತೆಯೊಂದು ಈಗ ಕೇಳುಗರ ಹೃದಯದಲ್ಲಿ ಕಚಗುಳಿ ಇಡುತ್ತಿದೆ.

ಹೃದಯ ಶಿವ ಗೀತ ರಚನೆ ಇರುವ ಈ ಹಾಡು ‘ಮೆಲೋಡಿ ಡ್ರಾಮಾ’ ಚಿತ್ರದ್ದು. ಕಿರಣ್ ರವೀಂದ್ರನಾಥ್ ಸಂಗೀತದಲ್ಲಿ ಮೂಡಿ ಬಂದಿರುವ ಹಾಡು ಜಾಲತಾಣದಲ್ಲಿ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಅಂದ ಹಾಗೆ ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ಈ ‘ಮೆಲೋಡಿ ಡ್ರಾಮ’ ಚಿತ್ರವನ್ನು ನಿರ್ಮಿಸಿದ್ದಾರೆ.

ಮಂಜು ಕಾರ್ತಿಕ್ ನಿರ್ದೇಶನದ ಚಿತ್ರದಲ್ಲಿ ‘ಯಾರು ಬರೆಯದ ಕವಿತೆ..’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಗೊಂಡಿತ್ತು. ಈ ಹಾಡು ಹೆಚ್ಚು ಹೆಚ್ಚು ಸಂಗೀತ ಪ್ರಿಯರ ಗಮನ ಸೆಳೆಯುತ್ತಿದೆ ಎಂಬುದು ಚಿತ್ರತಂಡಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಚಿತ್ರದ ಮೊದಲ ಹಾಡು ಇದಾಗಿದ್ದು, ಒಟ್ಟು ಏಳು ಹಾಡುಗಳು ಈ ಚಿತ್ರದಲ್ಲಿದೆ. ಸೋನು ನಿಗಮ್ , ಕೈಲಾಶ್ ಖೇರ್, ಪಲಾಕ್ ಮುಚ್ಚಲ್, ಮೊದಲಾದ ಖ್ಯಾತ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ಚಿತ್ರವೀಗ ಬಿಡುಗಡೆ ಹಂತದಲ್ಲಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ.

ಸತ್ಯ ಹಾಗೂ ಸುಪ್ರೀತ ಸತ್ಯನಾರಾಯಣ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದ ಇತರ ತಾರಾಗಣದಲ್ಲಿ ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಟರಂಗ, ಬ.ಲ.ರಜವಾಡಿ, ಲಕ್ಷ್ಮೀ ಸಿದ್ದಯ್ಯ ಮೊದಲಾದವರಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *