Snehapriya.com

June 8, 2025

ಸಸ್ಪೆನ್ಸ್ ಚಿತ್ರ ಅಮರಾವತಿ ಪಿಎಸ್ ಗೆ ಬಂಡೆ ಮಾಂಕಾಳಮ್ಮನ ಕೃಪೆ..

Social Share :

ಚಿತ್ರದ ಹೆಸರು ‘ಅಮರಾವತಿ ಪೊಲೀಸ್ ಸ್ಟೇಷನ್’.‌ಎಸ್.ಎ.ಆರ್. ಪ್ರೊಡಕ್ಷನ್ಸ್ ಲಾಛನದಲ್ಲಿ ಅಂಜನರೆಡ್ಡಿ ಹಾಗೂ ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ನಿರ್ಮಿಸುತ್ತಿರುವ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರವಿದು.

ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ‌ ಶ್ರೀ ಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ಡಾ ವಿ.ನಾಗೇಂದ್ರ ಪ್ರಸಾದ್ ಅವರು ಕ್ಲಾಪ್ ಮಾಡಿದರೆ, ನಿರ್ಮಾಪಕರಾದ ಅಂಜನ ರೆಡ್ಡಿ ಹಾಗೂ ಗೀತಾ ಅಂಜನರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು.

ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡುವಾಗ ದಲ್ಲಾಳಿಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಊರಗೌಡ ಪರಿಹಾರ ಹುಡುಕುತ್ತಾನೆ. ಆತ ಇದ್ದಕ್ಕಿದ್ದ ಹಾಗೆ ಕಾಣೆಯಾದಾಗ ಆತನನ್ನು ಪತ್ತೆ ಹಚ್ಚಲು ಬಂದ ಪೋಲೀಸ್ ಅಧಿಕಾರಿ ಕೂಡ ಕಣ್ಮರೆಯಾಗುತ್ತಾನೆ. ಇದಕ್ಕೆಲ್ಲ ಪರಿಹಾರ ಕಂಡುಹಿಡಿಯುವುದೇ ಸ್ನೇಹಿತನನ್ನು ಹುಡುಕಿಕೊಂಡು ಹಳ್ಳಿಗೆ ಬರುವ ಮುಖ್ಯ ಪಾತ್ರಧಾರಿ ಹೇಗೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತಾನೆ ಎಂಬುದನ್ನು ಸಸ್ಪೆನ್ಸ್, ಥ್ರಿಲ್ಲರ್ ಕಥೆಯೊಂದಿಗೆ ಹೇಳುವ ಪ್ರಯತ್ನವಿದು ಎಂಬುದು ಚಿತ್ರ ತಂಡದ ಮಾಹಿತಿ.

ಈಗಾಗಲೇ ಡಬಲ್ ಬೋರ್ಡ್ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಪುನೀತ್ ಅರಸೀಕೆರೆ ಅವರಿಗೆ ಇದು ಎರಡನೇ ಚಿತ್ರ. ಅಕ್ಟೋಬರ್ 9ರಿಂದ ಆರಂಭಿಸಿ ಅರಸೀಕೆರೆಯ ಪೋಲಿಸ್ ಸ್ಟೇಷನ್, ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಹಂತರ ಶೂಟಿಂಗ್ ಮುಗಿಸಿ, ನಂತರ ಬೆಂಗಳೂರಿನಲ್ಲಿ ಚಿತ್ರೀಕರಣ ಮುಂದುವರೆಸಲಾಗುವುದು ಎಂದರು ನಿರ್ದೇಶಕರು.

ಒಟ್ಟು 45 ರಿಂದ 50 ದಿನಗಳ ಕಾಲ ಶೂಟಿಂಗ್ ನಡೆಯಲಿದೆ ಎಂಬ ಮಾಹಿತಿಯೂ ನಿರ್ದೇಶಕ‌ ಪುನೀತ್ ಅವರಿಂದ ಬಂತು.

ಧರ್ಮ ಕೀರ್ತಿರಾಜ್ ಈ ಚಿತ್ರದ ಮುಖ್ಯ ಪಾತ್ರದಲ್ಲಿದ್ದು, ವೇದ್ವಿಕ ಜೋಡಿಯಾಗಿದ್ದಾರೆ. ಹಿರಿಯನಟಿ ಭವ್ಯ, ಉಮಾಶ್ರೀ, ಸಾಧುಕೋಕಿಲ, ಚಿಕ್ಕಣ್ಣ, ನಾಗೇಂದ್ರ ಪ್ರಸಾದ್, ಧರ್ಮಣ್ಣ ತಾರಾಗಣದಲ್ಲಿದ್ದಾರೆ.

ಚಿತ್ರದಲ್ಲಿ 4 ಹಾಡುಗಳಿದ್ದು, ರೋಣದ ಬಕ್ಕೇಶ್ ಸಂಗೀತ ನೀಡುತ್ತಿದ್ದಾರೆ. ವಿ.ರಮೇಶ್ ಬಾಬು ಛಾಯಾಗ್ರಹಣ, ಥ್ರಿಲ್ಲರ್ ಮಂಜು, ವಿಕ್ರಂ ಮೋರ್ ಸಾಹಸ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ತಿ ಸಂಭಾಷಣೆ ಇರಲಿದೆ ಎಂಬ ಮಾಹಿತಿಗಳನ್ನು ಚಿತ್ರತಂಡ ನೀಡಿತು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *