‘ಕೇಳದೆ ನಿಮಗೀಗ ದೂರದಲ್ಲಿ ಯಾರೋ..’ ಇದೊಂದು ನವಿರಾದ ಪ್ರೇಮಕಥಾನಕ..’
ಕೆ.ಪಿ.ರಘು ಕಡೂರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ರಿತಿಕ್ ಕೃಷ್ಣ ಹಾಗೂ ಸೌಮ್ಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೂರು ದಶಕಗಳ ಹಿಂದೆ ದಿವಂಗತ ಶಂಕರ್ ನಾಗ್ ಅಭಿನಯಿಸಿದ್ದ ‘ಗೀತಾ’ ಚಿತ್ರದ ಹಾಡು ‘ಕೇಳದೆ ನಿಮಗೀಗ ದೂರದಲ್ಲಿ ಯಾರೋ..’ ಎಂಬುದು ಅತ್ಯಂತ ಜನಪ್ರಿಯವಾಗಿತ್ತು. ಈಗ ಅದೇ ಜನಪ್ರಿಯ ಸಾಲು ಸಿನಿಮಾಗೆ ಶೀರ್ಷಿಕೆಯಾಗುತ್ತಿದೆ.
ಈಚೆಗೆ ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿಯ ಆದಿಶಕ್ತಿ ಶ್ರೀ ಕಾಳಿಕಾಂಬ ಅಮ್ಮನವರ ದೇವಾಲಯದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಪ್ರತಾಪ್ ರೆಡ್ಡಿ ಕ್ಲಾಪ್ ಮಾಡಿದರು. ಸಾನು ಎನ್.ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು.
ಸಾತ್ವಿಕ್ ಎನ್.ರೆಡ್ಡಿ ಮೂವೀಸ್ ಲಾಛನದಲ್ಲಿ ನವೀನ್ ಕುಮಾರ್ ಎನ್. ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನವೆಂಬರ್ 5ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಅಜನ್ ಸಂಗೀತ ಸಂಯೋಜನೆ, ಜೀವನ್ ಆಂಟೋನಿ ಛಾಯಾಗ್ರಹಣ ಈ ಚಿತ್ರಕ್ಕಿದೆ.