ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಿರ್ದೇಶಕ ಸಂಜೀವ ಮೇಗೋಟಿ ಸೈಕಾಲಾಜಿಕಲ್ ಥ್ರಿಲ್ಲರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಎಫ್.ಎಂ.ರೈನ್ ಬೋ (ಆರ್.ಜೆ) ಖ್ಯಾತಿಯಆರೋಹಣ ಸುಧೀಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
‘ಆದಿ ಪರ್ವ’ ಚಿತ್ರದ ಗೆಲುವಿನ ನಂತರ ನಿರ್ದೇಶಕ ಸಂಜೀವ್ ಮೇಗೋಟಿ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರವನ್ನು ಕೈಗೆತ್ತಿಕೊಂಡಿದ್ದು, ವರಲಕ್ಷ್ಮಿ ಶರತ್ ಕುಮಾರ್ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಮೂರು ಭಾಷೆಗಳಲ್ಲಿ ನಿರ್ಮಾಣವಾಗುವ ಈ ಚಿತ್ರದಲ್ಲಿ ತುಪ್ಪದ ಹುಡುಗಿ ರಾಗಿಣಿ ಕೂಡ ಅಭಿನಯಿಸುತ್ತಿರುವುದು ವಿಶೇಷ.
ಚಿತ್ರಕ್ಕೆ ಆರೋಹಣ ಸುಧೀಂದ್ರ ಸಂಗೀತ ನೀಡುತ್ತಿದ್ದು, ಮೂರು ಹಾಡುಗಳ ರಾಗ ಸಂಯೋಜನೆ ಹಾಗೂ ಸಾಹಿತ್ಯ ಇವರದಾಗಿದೆ.
ಖ್ಯಾತ ಹಿನ್ನೆಲೆ ಗಾಯಿಕಿ ಬಿ ಆರ್ ಛಾಯಾ ಒಂದು ಹಾಡಿಗೆ ದನಿಯಾಗಿದ್ದಾರೆ. ದೊಡ್ಡ ಬಜೆಟ್ ನ ಈ ಚಿತ್ರಕ್ಕೆ ಇನ್ನು ಹೆಸರಿಡಲಾಗಿಲ್ಲ. ಇದೇ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂಬುದು ಚಿತ್ರತಂಡದ ಮಾಹಿತಿ.