*ಝೇಂಕಾರ್ ಮ್ಯೂಸಿಕ್ ನಲ್ಲಿ ಮಾರುತ ಚಿತ್ರದ ಹಾಡುಗಳು..*
*ಭಾರಿ ಮೊತ್ತಕ್ಕೆ ಮಾರಾಟ *
* ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ – ಶ್ರೇಯಸ್ ಮಂಜು ಆಭಿನಯ *
ಕನ್ನಡದ ಮುಂಚೂಣಿಯ ನಿರ್ದೇಶಕರಲ್ಲಿ ಪ್ರಮುಖರಾದ ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಬಹಳ ಸಮಯದ ಬಳಿಕ ಒಂದಾಗಿ ಮಾಡಿರುವ ಚಿತ್ರ ಮಾರುತ..
ಕೆ.ಮಂಜು ಪುತ್ರ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಕೆ.ಮಂಜು ಮತ್ತು ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ.
ಈ ಚಿತ್ರತಂಡ ಈಚೆಗೆ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಅದೇನೆಂದರೆ, ಜೆಸ್ಸಿಗಿಫ್ಟ್ ಸಂಗೀತ ನೀಡಿರುವ ಆಡಿಯೋ ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಝೇಂಕಾರ್ ಮ್ಯೂಜಿಕ್ ಆಡಿಯೋ ಹಕ್ಕುಗಳನ್ನು ಖರೀದಿಸಿದೆ.
ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರ ನಿರ್ದೇಶನದ ‘ಸೂರ್ಯವಂಶ’ ‘ಜಮೀನ್ಧಾರು’, ‘ಸಿಂಹಾದ್ರಿಯ ಸಿಂಹ’, ‘ನನ್ನವಳು ನನ್ನವಳು’, ‘ಅಂಜಲಿ ಗೀತಾಂಜಲಿ’, ‘ತವರಿನ ತೊಟ್ಟಿಲು’ ಮೊದಲಾದ ಅನೇಕ ಸೂಪರ್ ಹಿಟ್ ಚಿತ್ರಗಳ ಆಡಿಯೋ ಹಕ್ಕನ್ನು ಸಹ ಝೇಂಕಾರ್ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿತ್ತು.
‘ಮಾರುತ’ ಚಿತ್ರದ ಐದು ಹಾಡುಗಳು ಚಿತ್ರರಸಿಕರ ಮನ ಗೆಲ್ಲುವಂತಿವೆ. ಹಾಗಾಗಿ ಈ ಜನಪ್ರಿಯವಾಗಲಿದೆ ಎಂಬುದು ಝೇಂಕಾರ್ ಮ್ಯೂಸಿಕ್ ನ ಭರತ್ ಜೈನ್ ವಿವರಣೆ.
ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ ‘ಮಾರುತ’ ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.
ದುನಿಯಾ ವಿಜಯ್, ಶ್ರೇಯಸ್ ಮಂಜು, ಬೃಂದಾ, ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಹಾಗೂ ಇತರರ ತಾರಾಬಳಗವಿದೆ.
ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿರುವುದು ವಿಶೇಷವಾಗಿದೆ.